ಬಿಜೆಪಿ ತೊರೆಯುವ ಬಗ್ಗೆ ಆನಂದ್ ಸಿಂಗ್ ಹೇಳಿದ್ದೇನು? | Oneindia Kannada

  • 6 years ago
'ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಖಚಿತ. ಆದರೆ, ಯಾವ ಪಕ್ಷದಿಂದ ಎಂಬುದನ್ನು ಮುಂದಿನ ದಿನಗಳಲ್ಲಿ ತೀರ್ಮಾನಿಸುತ್ತೇನೆ' ಎಂದು ಹೊಸಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಆನಂದ್ ಸಿಂಗ್ ಹೇಳಿದ್ದಾರೆ.

ಬಳ್ಳಾರಿಯ ಹೊಸಪೇಟೆ ನಿವಾಸದಲ್ಲಿ ಆನಂದ್ ಸಿಂಗ್ ಗುರುವಾರ ಬೆಂಬಲಿಗರ ಸಭೆ ನಡೆಸಿದರು. 'ಜನವರಿ 27ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ' ಎಂದು ಹೇಳಿದರು. ಇದರಿಂದಾಗಿ ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ಬಿಜೆಪಿಗೆ ಜಿಲ್ಲೆಯಲ್ಲಿ ಹಿನ್ನಡೆ ಉಂಟಾಗಿದೆ.

ಆನಂದ್ ಸಿಂಗ್ ಬಿಜೆಪಿ ತೊರೆಯುವ ಬಗ್ಗೆ ಹಲವು ದಿನಗಳಿಂದ ಸುದ್ದಿಗಳು ಹರಿದಾಡುತ್ತಿದ್ದವು. ಹೊಸಪೇಟೆಯಲ್ಲಿ ನಡೆದ ಬಿಜೆಪಿಯ ಪರಿವರ್ತನಾ ಯಾತ್ರೆಗೂ ಅವರು ಗೈರು ಹಾಜರಾಗಿದ್ದರು. ಪಕ್ಷ ತೊರೆಯುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.ಕಳೆದ ವಾರ ಆನಂದ್ ಸಿಂಗ್ ಅವರು ಕಾರ್ಮಿಕ ಸಚಿವ ಸಂತೋಷ್ ಲಾಡ್ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಆದರೆ, ಅವರು ಕಾಂಗ್ರೆಸ್ ಸೇರಲಿದ್ದಾರೆಯೇ? ಎಂಬುದು ಇನ್ನೂ ಖಚಿತವಾಗಿಲ್ಲ.

Ballari Vijayanagara assembly constituency BJP MLA Anand Singh all set to quit BJP. He will resign for MLA post on January 26, 2018. According to reports he may join Congress soon.

Recommended