Ambikathanayadattha(ಅಂಬಿಕಾತಯನದತ್ತ) Part 01

  • 5 years ago
ಜನೆವರಿ 31, ವರಕವಿ ಬೇಂದ್ರೆಯವರ ಜನ್ಮದಿನ. ಅಂಬಿಕಾತನಯದತ್ತ ಜಯಂತಿ. ಈ ವರ್ಷ ಅವರ 115ನೆಯ ಹುಟ್ಟು ಹಬ್ಬ ನಾಡಿನಾದ್ಯಂತ ಆಚರಿಸಲಾಗುತ್ತದೆ. ಭಾರತ ಹುಣ್ಣಿಮೆಯ ಮರುದಿನ ಗುರುಪ್ರತಿಪದೆಯ ದಿನ ಅಂಬಿಕಾತನಯದತ್ತರ ಜನ್ಮ ಧಾರವಾಡದಲ್ಲಾಯಿತು. (31-01-1896). ಕುಮಾರವ್ಯಾಸನ ತರುವಾಯ ಕಾವ್ಯಕೆ ಗುರುವೆನಿಸುವಂತೆ ಕವನ ರಚಿಸಿದ ಕವಿ ಬೇಂದ್ರೆ ಅಂದರೆ ಅತಿಶಯೋಕ್ತಿಯಲ್ಲ. ಹಿಂದೂ ಪಂಚಾಂಗದ ಪ್ರಕಾರ ಹಾಗೂ ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಕಾರ ಬೇಂದ್ರೆಯವರ ಜನ್ಮದಿನ ಒಂದೇ ದಿನ ಬರುವುದು ಅಪರೂಪ. ಈ ವರ್ಷ ಗುರುಪ್ರತಿಪದೆ ಜನೆವರಿ 31ರಂದು ಬಂದದ್ದು ಒಂದು ಯೋಗಾಯೋಗವೆಂದೇ ಹೇಳಬೇಕು.

Category

🗞
News

Recommended